ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
Cross references
ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.