ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
Cross references
ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.