Home Bibles ಕೀರ್ತನೆಗಳು 119:87 · ಕನ್ನಡ ಬೈಬಲ್
ಕೀರ್ತನೆಗಳು 119:87 · ಕನ್ನಡ ಬೈಬಲ್

ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.

Cross references

1 ಸಮುವೇಲ 20:3

ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.

1 ಸಮುವೇಲ 23:26

ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.

1 ಸಮುವೇಲ 24:6

ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.

1 ಸಮುವೇಲ 26:9

ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.

1 ಸಮುವೇಲ 26:24

ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.

2 ಸಮುವೇಲ 17:16

ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.

ಕೀರ್ತನೆಗಳು 119:51

ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.

ಕೀರ್ತನೆಗಳು 119:61

ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.

ಯೆಶಾಯ 58:2

ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.

ಮತ್ತಾಯ 10:28

ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

Interlinear

Choose Theme