ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
Cross references
ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.