ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
Cross references
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.