ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
Cross references
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.