ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Cross references
ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ.
ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.