ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
Cross references
ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.