ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.