ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
Cross references
ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.