ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
Cross references
ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು;
ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.