ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
Cross references
ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--