ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
Cross references
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು.
ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.