ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
Cross references
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ
ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.