ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
Cross references
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.