ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
Cross references
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.
ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;
ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.