ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.