ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
Cross references
ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.