ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
Cross references
ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.