ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
Cross references
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.