ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
Cross references
ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ,
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ