ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
Cross references
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.
ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.
ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.