ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
Cross references
ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು.
ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.