ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
Cross references
ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.