ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
Cross references
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.