ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
Cross references
ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.