ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
Cross references
ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.