ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.
Cross references
ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.