ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
Cross references
ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ