ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
Cross references
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?