ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
Cross references
ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.