ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
Cross references
ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.