ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
Cross references
ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.