ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
Cross references
ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.
ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.