ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
Cross references
ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.