ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
Cross references
ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.