ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
Cross references
ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ.
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.