ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
Cross references
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;