ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
Cross references
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.