ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
Cross references
ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.