Home Bibles ಕೀರ್ತನೆಗಳು 33:16 · ಕನ್ನಡ ಬೈಬಲ್
ಕೀರ್ತನೆಗಳು 33:16 · ಕನ್ನಡ ಬೈಬಲ್

ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.

Cross references

ನಿರ್ಗಮಕಾಂಡ 14:17

ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ನಿರ್ಗಮಕಾಂಡ 14:28

ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.

ಯೆಹೋಶುವ 11:4

ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.

ಯೆಹೋಶುವ 14:12

ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.

ನ್ಯಾಯಾಧಿಪತಿಗಳು 7:2

ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.

ನ್ಯಾಯಾಧಿಪತಿಗಳು 7:4

ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.

ನ್ಯಾಯಾಧಿಪತಿಗಳು 7:12

ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.

1 ಸಮುವೇಲ 2:9

ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.

1 ಸಮುವೇಲ 14:8

ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.

1 ಸಮುವೇಲ 17:4

ಆದರೆ ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.

1 ಸಮುವೇಲ 17:45

ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.

2 ಸಮುವೇಲ 21:16

ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.

1 ಅರಸುಗಳು 20:10

ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.

1 ಅರಸುಗಳು 20:15

ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.

1 ಅರಸುಗಳು 20:27

ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.

2 ದಿನವೃತ್ತಾಂತ 13:8

ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.

2 ದಿನವೃತ್ತಾಂತ 14:9

ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.

2 ದಿನವೃತ್ತಾಂತ 20:12

ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.

2 ದಿನವೃತ್ತಾಂತ 20:23

ಅಮ್ಮೋನ್‌, ಮೋವಾಬ್ಯರ ಮಕ್ಕಳು ಸೇಯಾರ್‌ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.

2 ದಿನವೃತ್ತಾಂತ 32:8

ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.

2 ದಿನವೃತ್ತಾಂತ 32:21

ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.

ಯೋಬ 36:7

ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.

ಯೋಬ 39:11

ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?

ಕೀರ್ತನೆಗಳು 20:8

ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.

ಕೀರ್ತನೆಗಳು 44:3

ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.

ಕೀರ್ತನೆಗಳು 44:6

ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.

ಸಭಾಪ್ರಸಂಗಿ 9:11

ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.

ಯೆರೆಮಿಯ 9:23

ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

ಯೆರೆಮಿಯ 48:14

ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.

ಹೊಶೇಯ 10:13

ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.

ಆಮೋಸ 2:14

ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

ಆಮೋಸ 2:15

ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.

Interlinear

Choose Theme