ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
Cross references
ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು.
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.
ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.
ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.