ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
Cross references
ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.