ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
Cross references
ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.