ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
Cross references
ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.