ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
Cross references
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.