ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
Cross references
ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.