Home Bibles ಕೀರ್ತನೆಗಳು 4:5 · ಕನ್ನಡ ಬೈಬಲ್
ಕೀರ್ತನೆಗಳು 4:5 · ಕನ್ನಡ ಬೈಬಲ್

ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.

Cross references

ದ್ವಿತೀಯೋಪದೇಶಕಾಂಡ 33:19

ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.

2 ಸಮುವೇಲ 15:12

ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

ಕೀರ್ತನೆಗಳು 2:12

ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.

ಕೀರ್ತನೆಗಳು 26:1

ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

ಕೀರ್ತನೆಗಳು 37:3

ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.

ಕೀರ್ತನೆಗಳು 50:14

ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

ಕೀರ್ತನೆಗಳು 51:19

ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.

ಕೀರ್ತನೆಗಳು 62:8

ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

ಕೀರ್ತನೆಗಳು 77:7

ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?

ಕೀರ್ತನೆಗಳು 84:11

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಯೆಶಾಯ 1:11

ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.

ಯೆಶಾಯ 26:3

ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.

ಯೆಶಾಯ 50:10

ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.

ಯೆಶಾಯ 61:8

ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಮಲಾಕಿ 1:8

ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?

ಮಲಾಕಿ 1:11

ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 5:23

ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ

ಹೆಬ್ರಿಯರಿಗೆ 13:15

ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.

1 ಪೇತ್ರ 4:19

ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.

Interlinear

Choose Theme