ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
Cross references
ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.