ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
Cross references
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.
ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.